ವಚನ - 972     
 
ಎನ್ನ ಕಾಯವ ಬಸವಣ್ಣನಳವಡಿಸಿಕೊಂಡ. ಎನ್ನ ಮನವ ಚೆನ್ನಬಸವಣ್ಣನಳವಡಿಸಿಕೊಂಡ. ಎನ್ನ ಭಾವವ ಮಡಿವಾಳಯ್ಯನಳವಡಿಸಿಕೊಂಡ. ಇಂತೀ ಮೂವರು ಒಂದೊಂದನಳವಡಿಸಿಕೊಂಡ ಕಾರಣ ಗುಹೇಶ್ವರಾ, ನಿಮ್ಮ ಶರಣರೆಂಬ ತ್ರಿಮೂರ್ತಿಗಳಿಗೆ ನಮೋ ನಮೋ ಎನುತಿರ್ದೆನು.