ವಚನ - 14     
 
ಅಂಜನಗಾರನ ಕೈ ನಂಜುಗೊಂಡಿದೆ ಅಯ್ಯಾ. ಅಂಜನಗಾರ ಹರುಷವಾಗಲೆಂದು ಹರಸಿಕೊಂಡ ಹರಕೆ ಈಡೇರಿತ್ತೆನಗಿಂದು. ಕುಂಜರಂಗಳೆಂಟಂಜಿ ಕೆಲ ಸಾರಿದೆವೈ ಅಂಜನವ ಬಲ್ಲ ನೀನೊಬ್ಬನಲ್ಲದಿಲ್ಲ ಕಾಣಾ, ಕಪಿಲಸಿದ್ಧಮಲ್ಲಿನಾಥ.