ವಚನ - 16     
 
ಅಂತರಾತ್ಮ ಪರಮಾತ್ಮ ಭೂತಾತ್ಮವೊಳಗಾದ ಆಧ್ಯಾತ್ಮಿ ಕೇಳಾ: ನೀನು ಯೋಗದ ಪ್ರಮಾಣ ಬಲ್ಲ ಅಯ್ಯನು ಶ್ರೋತ್ರೇಯ ಮನೆಯಲ್ಲಿ, ನೇತ್ರೆಯ ಜಿಹ್ವೆಯಲ್ಲಿ, ಆನಂದ ಪಾತ್ರೆಯಲ್ಲಿ ಸಂಗತಿ ಸದಾಚಾರ ನಿಷ್ಕಳ ಪರಮಸೀಮೆ ಎಂಬ ಪಾತ್ರೆಯಲ್ಲಿ ಪಂಚಬ್ರಹ್ಮವನೊಡಗೂಡಿದ ಪಂಚಸ್ತ್ರೀಯರಿಗೆ ಪ್ರಸಾದವನಿಕ್ಕುವಾಗ ಪ್ರಸನ್ನತೆಯೆಂಬ ಪ್ರಸಾದವನನುಗ್ರಹಿಸಲರಿಯದೆ ಇದ್ದ ಕಾರಣ ಅಂತರಿಸಿದೆಯಯ್ಯಾ ಆದ್ಯಂತಪ್ರಸಾದವ ಕೊಂಡ ಕಾರಣದಲ್ಲಿ ಆನು ನೀನಾದೆ; ಕಪಿಲಸಿದ್ಧಮಲ್ಲಿಕಾರ್ಜುನನ ಕೂಡಿ ಸಂದಳಿದೆ.