ವಚನ - 18     
 
ಅಂದು ಅರಿಯಲಾದ ಆನಂದ ರೂಪಿನ ನಿಜವನು ತಂದೆನ್ನ ಕರಕ್ಷೇತ್ರದಲ್ಲಿ ಬಿತ್ತಿದ, ಸದ್ಗುರುಸ್ವಾಮಿ. ಕೊಂಬೆ ಬೇರಾಗಿ ಬೇರು ಕೊಂಬೆಯಾಗಿ ಫಲಂಗಳಾರಾದವು. ಆ ಫಲ ಗುರುವಿಂಗೊಂದು ಲಿಂಗಕ್ಕೊಂದು ಉಳಿದ ನಾಲ್ಕ ಜಂಗಮಕ್ಕಿತ್ತು ಹಿಂದು ಮುಂದುಗೆಟ್ಟ ಕಪಿಲಸಿದ್ಧಮಲ್ಲಿಕಾರ್ಜುನ.