ವಚನ - 20     
 
ಅಂದೊಮ್ಮೆ ಜಗನ್ನಾಥ ಭಸ್ಮವ ತೊಡೆದು ಕೈಯ ಬಿರ್ಚಿದರೆ ಕೇಳಿರಣ್ಣ! ಅಣ್ಣ! ಅಣ್ಣ ಕೇಳಿರಣ್ಣ! ಬ್ರಹ್ಮ ತಾ ಮರೆದೊರಗಿ ವಿಷ್ಣು [ತಾ] ಜುಮ್ಮೆಂದು ವೇದಗಳು ಮತಿಗೆಟ್ಟು ದೆಸೆಗೆ ಬಾಯ ಬಿಟ್ಟವಯ್ಯ! ಎನಿಸೆನಿಸು ಲೋಕಂಗಳು ಅನಿಸು ಬಾಯ ಬಿಟ್ಟವು! ಕೇಳಿರಣ್ಣ! ಅಣ್ಣ! ಅಣ್ಣ ಕೇಳಿರಣ್ಣ! ತಮ್ಮ ಬಲ ಅವಕುಂಟು ಕೇಳಿರಣ್ಣ! ಆಯುಷ ತನಿಗೆನಿಸೆಂಬುದವೈ ಎನ್ನ ಕಪಿಲಸಿದ್ಧಮಲ್ಲಿನಾಥಯ್ಯನ ಕೈಯ ಸಬುದಕಣ್ಣ!