ವಚನ - 30     
 
ಅರ್ಚಿಸಲು ಬೇಡವದು, ಪೂಜಿಸಲು ಬೇಡ, ನಿತ್ಯ ಜಪತಪನೇಮ ನಿನಗೆ ಬೇಡ. ಸಚ್ಚಿದಾನಂದ ಗುರು ಕಪಿಲಸಿದ್ಧಮಲ್ಲಿಕಾರ್ಜುನನ ಬಸವಾಕ್ಷರತ್ರಯವ ನೆನೆ ನಿತ್ಯಪದವು.