ವಚನ - 60     
 
ಅಯ್ಯ, ಮನದ ಜಡ ಮಣ್ಣ ಕಳೆದುದಯ್ಯಾ. ಶಾಂತ ಉದಕದೊಳಗಿಕ್ಕಿ ತೊಳೆವೆ ನೋಡಯ್ಯಾ. ಅದರುದಕವನೆ ಮಾಡಿ ಯೋಗ ಕಂಪನಿಕ್ಕಿ ಮೊರವೆ ನೋಡಯ್ಯ. ಅದನೊಂದೆಡೆ ತೆಗೆದು ಬಂದು ಬರುಗಾಣದಲಿಕ್ಕಿ ಹಿಳಿವ ನೋಡಯ್ಯ. ಹಿಳಿದ ರಸದ ಕಂಪ ತೊಡೆವೆಡೆಯನೊಬ್ಬನೆ ಕಪಿಲಸಿದ್ಧಮಲ್ಲಿಕಾರ್ಜುನ.