ವಚನ - 114     
 
ಅರಿಯಬಾರದ ಘನವನರಿದು ಸಾಧಿಸಿ ಗೆದ್ದ ಘನಮಹಿಮ ಶರಣರ ಮುಂದೆ ಎನ್ನ ಪ್ರತಾಪ ನಿಲುಕುವುದೆ? ಅವರಿಪ್ಪರು ಲಿಂಗಪ್ರಭೆಯೊಳಗೆ; ನಾನಿಪ್ಪೆನು ಅಹಂಕಾರ ಪಂಜರದೊಳಗೆ ಎನ್ನ ನೊಸಲ ಕಣ್ಣಿನ ಕಿಚ್ಚುಡುಗಿ ಲಜ್ಜಿತವಾಗಿ ಮರಳಿ ಬಂದೆನ್ನ ಸುತ್ತಿ ಮುತ್ತಿತ್ತು. ನಾನು ಶರಣೆಂಬ ಗುರುವಚನವಿದಿರೆದ್ದು ಕೊಲುವಡೆ, ಕಪಿಲಸಿದ್ಧಮಲ್ಲಿನಾಥನೊಳಗೆ ಅಳಿವೆನಲ್ಲದೆ ಉಳಿವನಲ್ಲ.