ವಚನ - 217     
 
ಆವನಾಗಿ ಒಬ್ಬನು ಪಿಡಿದೊಯ್ದು ಕಾಳಕೂಟವಿಷವನೆರುಗೆಯ ಮೇಣು ಪಾಯಸಾಮೃತವನೆರುಗೆಯ. ಎರೆದಡೆ ಮನವಿಚ್ಛಂದವಾಗದೊಂದೆಯಂದದಲ್ಲಿಪ್ಪಂತಪ್ಪ ನಿಮ್ಮದೊಂದು ಸಮತಾಗುಣ ಎನ್ನನೆಂದು ಬಂದು ಪೊದ್ದಿಪ್ಪುದು ಹೇಳಾ, ಕಪಿಲಸಿದ್ಧಮಲ್ಲಿಕಾರ್ಜುನಾ.