ವಚನ - 230     
 
ಇಂತಪ್ಪ ಸತ್ಯಾರ್ಥವನರಿದು ಸರ್ವಪ್ರಪಂಚ ಮರೆದು ಹಾಲುಳ್ಳಲ್ಲಿ ಹಬ್ಬವ ಮಾಡಿ, ಗಾಳಿ ಉಳ್ಳಲ್ಲಿ ತೂರಿಕೊಳ್ಳಿ! ಬಳಿಕ ಅರಸಿದರುಂಟೆ ಪರಮಸುಖವು ನಿಜಗುರು ಸ್ವತಂತ್ರ ಕಪಿಲಸಿದ್ಧಮಲ್ಲಿಕಾರ್ಜುನನಲ್ಲಿ? ಹರಗೋಲ ಪಡೆದಲ್ಲಿ ತೊರೆಯ ದಾಂಟಿಕೊಳ್ಳಿರಣ್ಣಾ.