ವಚನ - 357     
 
ಐವರ ಸಂಗಡ ಉದಯದಲ್ಲಿ ಹೊರವಂಟಿರಾದಡೆ, ಕೇಳಿರಣ್ಣಾ, ಮಧ್ಯಾಹ್ನಕ್ಕೆ ಬಂದಿರಾದಡೆ, ಕಳೆಯಳಿದು ಕಳೆಯ ತಪ್ಪದೆ ನಿಂದಿರಾದಡೆ, ಬಟ್ಟೆ ಸರಿಸ ಕಪಿಲಸಿದ್ಧಮಲ್ಲಿಕಾರ್ಜುನನಲ್ಲಿಗೆ ಹೋಯಿತ್ತು.