ವಚನ - 372     
 
ಒಬ್ಬರ ಮನವ ನೋಯಿಸಿ, ಒಬ್ಬರ ಮನವ ಘಾತವ ಮಾಡಿ, ಗಂಗೆಯ ಮುಳುಗಿದಡೇನಾಗುವುದಯ್ಯಾ? ಚಂದ್ರನು ಗಂಗೆಯ ತಡಿಯಲ್ಲಿದ್ದಡೇನು? ಕಲಂಕ ಬಿಡದಾಯಿತ್ತಯ್ಯಾ. ಅದು ಕಾರಣ, ಮನವ ನೋಯಿಸಿದವನೆ, ಒಬ್ಬರ ಘಾತವ ಮಾಡದವನೆ, ಪರಮಪಾವನ ನೋಡಾ, ಕಪಿಲಸಿದ್ಧಮಲ್ಲಿಕಾರ್ಜುನಾ.