ವಚನ - 394     
 
ಕತ್ತಲೆಯೊಳಗಡಗಿದ ನೆಳಲಿನ ಬೀಜ ಬಿತ್ತದ ಮುನ್ನ ಮಾಮರನಾಯಿತ್ತು. ತನ್ನ ನೆಳಲೆಲ್ಲಾ ಬೆಳದಿಂಗಳು. ನೋಡ ಹೋದವರ ಕಣ್ಣೆಲ್ಲಾ ಒಡೆದವು. ಉಲುಹಿದ್ದೂ ಉಲುಹಿಲ್ಲ; ಕಪಿಲಸಿದ್ಧಮಲ್ಲಿಕಾರ್ಜುನಯ್ಯ, ಆ ಮರದ ಹೋಟೆಯೊಳಗಣ ಮಧುವಿನಂತಿದ್ದನು.