ವಚನ - 395     
 
ಕಥನ ಬ್ರಹ್ಮಾಂಡದಲ್ಲಿ ಮಥನಿಸುವ ಭೇದವನು ಸುಚಿತ್ತದಿಂದವೆ ಕಂಡೆ. ಸಾಕ್ಷಾತ್ ಉರುತರ ಕೈವಲ್ಯ ಪರಮ ಸೀಮೆಯ ಮೀರಿ ಒಡಲಿಪ್ಪುದದು ನಿತ್ಯ ಸಾನಂದದಾ ಆನಂದಸ್ಥಾನದಲ್ಲಿ. ಅನಿಪ್ಪ ಲೋಕದಲ್ಲಿ ತಾನಿಪ್ಪ ನಿಷ್ಕಳದ ಪುಷ್ಕರದಲ್ಲಿ ಸ್ವಾನುಭಾವ ದೀಕ್ಷೆ ನಾನಿಪ್ಪ ಸಂಯೋಗ ಮೂಱಱ ಮೇಲಿಪ್ಪ ಮುಕ್ತ್ಯಾಂಗನೆಯರ ಕೂಟ ನೀನು ನಾನಾದೆ ಕಪಿಲಸಿದ್ಧಮಲ್ಲೇಶ್ವರ.