ವಚನ - 470     
 
ಕ್ಲುಪ್ತವ ಮಾಡಿ ತನಗೆ ಬೇಕೆನ್ನ ಪ್ರಸಾದಿ ಬಸವಣ್ಣ. ಬಂದುದನತಿಗಳೆದು `ಅಲ್ಲ ಒಲ್ಲೆ' ಎನ್ನ ಪ್ರಸಾದಿ ಬಸವಣ್ಣ. ತಾನೆಂಬ ರೂಪ ಅಯ್ಯನೆಂಬ ರೂಪಿನಲ್ಲಿ ಲೋಪಮಾಡಿದ ಪ್ರಸನ್ನ ಪ್ರಸಾದಿ ಕಾಣಾ, ಬಸವಣ್ಣ ಕಪಿಲಸಿದ್ಧಮಲ್ಲಿಕಾರ್ಜುನಯ್ಯಾ.