ವಚನ - 542     
 
ಜ್ಞಾನಿಗಳಾದ ಬಳಿಕ ಪರಿಪೂರ್ಣ ಜಗತ್ತೆಂದರಿಯಬೇಕು. ಜ್ಞಾನಿಗಳಾದ ಬಳಿಕ ಪಾಪವಾಸನೆ ತೊರೆದಿರಬೇಕು. ಜ್ಞಾನಿಗಳಾದ ಬಳಿಕ ಅನ್ಯರ ನುಡಿಗೆ ಒಳಗಾಗಬಾರದು. ಜ್ಞಾನಿಗಳಾದ ಬಳಿಕ ಅನ್ಯರ ನಿಂದೆಗೆ ಒಳಗಾಗಬಾರದು, ಕಪಿಲಸಿದ್ಧಮಲ್ಲಿಕಾರ್ಜುನಾ.