ವಚನ - 585     
 
ತನುವಿಡಿದು ದಾಸೋಹವ ಮಾಡಿ ಗುರುಪ್ರಸಾದಿಯಾದ ಬಸವಣ್ಣ. ಮನವಿಡಿದು ದಾಸೋಹವ ಮಾಡಿ ಲಿಂಗಪ್ರಸಾದಿಯಾದ ಬಸವಣ್ಣ. ಧನವಿಡಿದು ದಾಸೋಹವ ಮಾಡಿ ಜಂಗಮಪ್ರಸಾದಿಯಾದ ಬಸವಣ್ಣ. ಇಂತೀ ತ್ರಿವಿಧವಿಡಿದು ದಾಸೋಹವ ಮಾಡಿ ಸದ್ಗುರು ಕಪಿಲಸಿದ್ಧಮಲ್ಲಿಕಾರ್ಜುನಯ್ಯಾ, ನಿಮ್ಮ ಶರಣ ಸ್ವಯಪ್ರಸಾದಿಯಾದನಯ್ಯಾ ಬಸವಣ್ಣ.