ವಚನ - 700     
 
ನಿನ್ನವನಾಗಿ ಅನ್ಯರ ಬೇಡುವ ಅನ್ಯಾಯವನೇನೆಂಬೆನೆಲೆಯಯ್ಯಾ. ನಿನ್ನನರ್ಚಿಸಿದ ಪುರಾತನರು ನೀವೆಯಾದರು. ನಿನ್ನನರ್ಚಿಸಿದ ಬಸವಣ್ಣ ನೀನೆಯಾದ. ಎಲೆ ಕಪಿಲಸಿದ್ಧಮಲ್ಲಿಕಾರ್ಜುನಯ್ಯ, ಗುರುವಾಗಿ ಬಂದೆನ್ನ ಭವದ ಬೇರ ಹರಿದ ಬಳಿಕ ನಿನ್ನವರು ನೀನು ನಾನೆಂಬ ಸಂದೇಹವೇಕಯ್ಯ?