ವಚನ - 1149     
 
ಹೆಸರಿಡಬಾರದ ಘನತರ ಲಿಂಗವ ಹೆಸರಿಟ್ಟು, ವಾಙ್ಮನಕ್ಕಗೋಚರವಪ್ಪ ಲಿಂಗವ ವಾಕ್ಯಕ್ಕೆ ತಂದು, `ಅತ್ಯತಿಷ್ಠದ್ದಶಾಂಗುಲಂ' ಎಂಬ ಲಿಂಗವ ಚಿತ್ತಕ್ಕೆ ತಂದು, ಸುತ್ತಿರ್ದ ಮಾಯಾಪ್ರಪಂಚವ ಬಿಡಿಸಿದ ಬಸವಣ್ಣ; ಚಿತ್ತಶುದ್ಧನ ಮಾಡಿದ ಬಸವಣ್ಣ. ಮಲತ್ರಯಂಗಳ ಹರಿದು, ಶುದ್ಧ ತಾತ್ಪರ್ಯವರುಹಿ, ಮುಕ್ತನ ಮಾಡಿದ ಗುರು ಬಸವಣ್ಣ. ಕಪಿಲಸಿದ್ಧಮಲ್ಲಿಕಾರ್ಜುನಯ್ಯನೆನ್ನ ಕಾರಣ ಧರೆಗೆ ಬಂದ.