ವಚನ - 1194     
 
ಮುಖದಿಂದ ಹುಟ್ಟಿಪ್ಪ ಮೂರರ್ಪಿತೋದಕದ ಒಳಗೆ, ಹುಟ್ಟಿತ್ತು ಶುದ್ಧ ಪ್ರಸಾದೋದಕ. ಸದಮಲ ಜ್ಞಾನದಂಘ್ರಿಯಲ್ಲಿ ಹುಟ್ಟಿತ್ತೊಂದುದಕ. ಅದನು ಒಯ್ದೆರೆದಲ್ಲಿ ಉದ್ಭವಿಸಿತ್ತು ತಾ ಕರಣೇಂದ್ರಿಯವನತಿಗಳೆದು ಹತ್ತನೆಯ ಪಾದೋದಕ ಕ್ರಮವಿಂತುಟಯ್ಯಾ, ಕಪಿಲಸಿದ್ಧಮಲ್ಲಿಕಾರ್ಜುನಾ.