ವಚನ - 1213     
 
ಜಲವ ತರದೆ, ಪಾವಕವ ಹೊತ್ತಿಸದೆ, ಪಾಕವ ಮಾಡಿ ಉಣಬಲ್ಲಡೆ ಐಕ್ಯನೆಂಬೆ, ಆರೂಢನೆಂಬೆ, ಆರುಸ್ಥಲವ ಮೀರಿದ ಮಹಾಯೋಗಿ ಎಂಬೆ, ಕಪಿಲಸಿದ್ಧಮಲ್ಲಿಕಾರ್ಜುನಾ.