ವಚನ - 1247     
 
ಬೆಳಗು ಬೆಳಗು ಹಳಚುವಲ್ಲಿ ಕತ್ತಲೆ ಉಳಿಯಬಲ್ಲುದೆ ಅಯ್ಯಾ ? ಶರಣರು ಮಹಾನುಭಾವ ಗೋಷ್ಠಿಯ ಮಾಡುವಲ್ಲಿ, ಸಂಗದೊಳಿರ್ದವರ ಅಜ್ಞಾನವಳಿದು ನಿಜವನೈದುವರಯ್ಯಾ. ನಿಮ್ಮ ಮಹಾನುಭಾವದ ಸೋಂಕಿನ ಸೆರಗಿನೊಳಗಿರ್ದು ನಾನು ಪರಮಸುಖಿಯಾಗಿ ಮಡಿವಾಳನ ಪಾದದಲ್ಲಿ ಮನ ಮಗ್ನವಾದೆನು ಕಾಣಾ, ಕಪಿಲಸಿದ್ಧಮಲ್ಲಿಕಾರ್ಜುನಾ.