ವಚನ - 1285     
 
ಇಂದ್ರಾದಿ ದೇವತಾ ಸಂಕುಳಕ್ಕೆ ಅಂತಪ್ಪ ಪದವನಿತ್ತಾತ ಬಸವಣ್ಣನಯ್ಯಾ. ಬ್ರಹ್ಮ-ವಿಷ್ಣು ಮೊದಲಾದ ದೇವತಾಮೊತ್ತಕ್ಕೆ ಅಂತಪ್ಪ ಪದವನಿತ್ತಾತ ಬಸವಣ್ಣನಯ್ಯಾ. ಶಿವಲಿಂಗಭಕ್ತರಿಗೆ ಚರಲಿಂಗಧಾರಣೆಯ ಪರಿಯಾಯದಿಂದಲೊರೆದಾತ ಗುರು. ಇಹಲೋಕ ಪರಲೋಕದನುಮಿಷದ ಸುದ್ದಿಯನರುಹಿದಾತ ಗುರು ಬಸವಣ್ಣನಯ್ಯಾ, ಕಪಿಲಸಿದ್ಧಮಲ್ಲಿಕಾರ್ಜುನಯ್ಯಾ.