ವಚನ - 1308     
 
ಅಹುದಹುದು ಮತ್ತೇನು? ಮರಹಿಂಗೆ ಹಿರಿದು ಕಿರಿದುಂಟಲ್ಲದೆ, ಅರುಹಿಂಗೆ ಹಿರಿದು ಕಿರಿದುಂಟೆ? ಹೇಳಯ್ಯಾ. ಸಾವಂಗೆ ಭಯವುಂಟಲ್ಲದೆ ಅಜಾತಂಗೆ ಭಯವುಂಟೆ? ಹೇಳಯ್ಯಾ. ಕಪಿಲಸಿದ್ಧಮಲ್ಲಿನಾಥನಲ್ಲಿ, ಮಹಾದೇವಿಯಕ್ಕನ ನಿಲುವಿಂಗೆ ಶರಣೆಂದು ಶುದ್ಧನಾದೆ ಕಾಣಾ, ಚೆನ್ನಬಸವಣ್ಣಾ.