ವಚನ - 1312     
 
ಎಕ್ಕೆವಿಂಡುಗಳೆಂಬವರು ಮುಕ್ಕಣ್ಣಾ, ನಿಮ್ಮ ಗಣಂಗಳು. ಬತ್ತಿದ ಕೆರೆ ಬಾಯಬಿಟ್ಟಂತೆ ಮೊರೆಯಿಟ್ಟು ಬರಲು, ಹೊತ್ತಿದ ಅಂಗಾಲ ಕಿಚ್ಚು ನೆತ್ತಿಯ ಮುಟ್ಟಿದಡೆ, ಚಕ್ಕನೆ ಕಪಿಲಸಿದ್ಧಮಲ್ಲಿನಾಥ ನೊಸಲಕಣ್ಣ ತೆಗೆದನು.