ವಚನ - 1334     
 
ಎನ್ನ ತನು ಕರಗಿ, ಎನ್ನ ಮನ ಕರಗಿ ಕೊರಗಿದ ದುಃಖವಿದಾರದಯ್ಯಾ? `ಅಯ್ಯಾ ಅಯ್ಯಾ' ಎಂದು ಅಳುವ ಅಕ್ಕೆ ಇದಾರದಯ್ಯಾ? ಮರಹೆಂಬ ಕೂರಸಿಗೆ ಗುರಿಮಾಡಿದವರಾರಯ್ಯಾ? ಹಾ! ಹಾ! ಎಂಬ ಧ್ವನಿಯ ಕೇಳಲಾರದೆ, ಕಂಡು ಕರುಣದಿಂದ ಶಿರವ ಹಿಡಿದೆತ್ತಿ, ಎನ್ನ ಕಣ್ಣ ನೀರ ತೊಡೆದನು ಕಪಿಲಸಿದ್ಧಮಲ್ಲಿನಾಥಯ್ಯನು.