ವಚನ - 1340     
 
ಅಂಗವಳಿದು ನಿಂದವನೆಂದು ನಾನರಿಯೆ; ಘನಲಿಂಗದಲ್ಲಿ ಸಲೆಸಂದವನೆಂದು ನಾನರಿಯೆ; ಆವ ವೇಷದಲ್ಲಿ ಬಂದು ನಿಂದ ಠಾವನರಿಯೆ; ಕ್ರೋಧವೆಂಬ ಸಂಸಾರದ ಸಾಗರದಲ್ಲಿ ಸಾಧನೆಯ ಮಾಡಲಾಗಿ ಪ್ರಭುದೇವರ ಸುಳುಹು ಅಘಟಿತವಾಯಿತ್ತು ಕಪಿಲಸಿದ್ಧಮಲ್ಲಿಕಾರ್ಜುನಾ.