ವಚನ - 1421     
 
ಭೂಮಿ ಒಂದೆಂದಡೆ ಬೆಳೆವ ವೃಕ್ಷ ಹಲವು ತೆರನುಂಟು. ಉದಕ ಒಂದೆಂದಡೆ ಸವಿಸಾರದ ಸಂಪದ ಬೇರುಂಟು. ನಿನ್ನೊಳಗು ನಾನಾದಡೆ ತಾಮಸದ ರಾಗವಿರಾಗವಾಗದು. ಕಪಿಲಸಿದ್ಧಮಲ್ಲಿಕಾರ್ಜುನಲಿಂಗವೆಂಬ ಪುರುಷರತಿ ಕೂಟಸ್ಥವಿಲ್ಲ.