ವಚನ - 1435     
 
ಅರಿವೆನೆಂದಡೆ `ಸತ್ಯಂ ಜ್ಞಾನಮನಂತಂ ಬ್ರಹ್ಮ' ಎಂಬ ಶ್ರುತಿ ಸಾರುತ್ತಿದೆ. ಮರೆವೆನೆಂದಡೆ `ಸಾಕ್ಷಾತ್ ಸಚ್ಚಿದಾನಂದಂ ಬ್ರಹ್ಮ' ಎಂಬ ಕೈವಲ್ಯೋಪನಿಷತ್ ಘೋಷಿಸುತ್ತಿದೆ. ಅರಿವು ವಸ್ತುಸ್ವರೂಪ, ಮರವು ಮಾಯಾಸ್ವರೂಪವೆಂದಡೆ ಆನು ನಿರ್ವಯಲ ಸ್ವರೂಪನಾದೆ ನೋಡಾ, ಕಪಿಲಸಿದ್ಧಮಲ್ಲಿಕಾರ್ಜುನಾ.