ವಚನ - 1497     
 
ಭಕ್ತನಾಗಿ ಭಕ್ತಿಯ ಮಾಡುವುದದು ಲೇಸಯ್ಯಾ; ಶಕ್ತಿಯಿಲ್ಲದಿರೆ ತಮ್ಮ ಪಾದಕೃಪೆ ಇಷ್ಟವೆಂಬುದದು ಬಹು ಲೇಸಯ್ಯಾ. ಮಹೇಶನ ಮಲತ್ರಯವಳಿವುದು ದುರ್ಲಭ ಕಂಡಯ್ಯಾ, ಚರಿಸಿ ಚರಿಸಿ ಜಗವನ್ನುದ್ಧರಿಸುವುದು ಬಹು ದುರ್ಲಭ ಕಂಡಯ್ಯಾ. ಕಪಿಲಸಿದ್ಧಮಲ್ಲಿಕಾರ್ಜುನಾ.