ವಚನ - 1502     
 
ವಾಲ್ಮೀಕನ ಶೇಷಪ್ರಸಾದವೆಲ್ಲ ಸಂಸ್ಕೃತಮಯವಾಯಿತ್ತು ಮರ್ತ್ಯಕ್ಕೆ. ದೂರ್ವಾಸನ ಉಪದೇಶವೆಲ್ಲ ಚಂಡಾಲರ ಮುನಿಗಳ ಮಾಡಿತ್ತು ಸ್ವರ್ಗಕ್ಕೆ. ಕುಲವೆಂದಡೆ ಮಲತ್ರಯವು ಬಿಡವು ನೋಡಾ, ಕಪಿಲಸಿದ್ಧಮಲ್ಲಿಕಾರ್ಜುನಾ.