ವಚನ - 1512     
 
ಲಗ್ನಕ್ಕೆ ವಿಘ್ನ ಬಾರದೆಂದು ಜ್ಯೋತಿಷ್ಯ ಕೇಳುವ ಅಣ್ಣಗಳಿರಾ, ಕೇಳಿರಯ್ಯಾ: ಅಂದೇಕೆ ವೀರಭದ್ರನ ಸೆರಗು ಸುಟ್ಟಿತ್ತು? ಅಂದೇಕೆ ಮಹಾದೇವಿಯರ ಬಲಭುಜ ಹಾರಿತ್ತು? ಇಂದೇಕೆ ಎನ್ನ ವಾಮನೇತ್ರ ಚರಿಸಿತ್ತು? ಕಪಿಲಸಿದ್ಧಮಲ್ಲಿಕಾರ್ಜುನಾ.