ವಚನ - 1543     
 
ಅಲ್ಲದಯ್ಯಗಳು ಇಲ್ಲದಾಟಕ್ಕೆ ಮೈಗೊಟ್ಟ ಕೇಡ ನೋಡಾ. ಇಲ್ಲದಯ್ಯಗಳು ಅಲ್ಲದಾಟಕ್ಕೆ ಮೈಗೊಡರು ನೋಡಾ. ಇಂದೆಲ್ಲ ಅಲ್ಲಮನ ಬಲ್ಲ ಬೋಧೆಯಿಂದ ಸಲ್ಲೀಲೆಯಾಯಿತ್ತು. ವಲ್ಲಭೆ ಶಿವ ಕಪಿಲಸಿದ್ಧಮಲ್ಲಿಕಾರ್ಜುನದೇವಾ.