ವಚನ - 1598     
 
ಸೊಲ್ಲಿಗೆ ಒಂದು ಖಂಡುಗ ನವಣೆ ನುಂಗಿತ್ತಯ್ಯಾ. ಆ ನವಣೆಯ ಹೊಯ್ದಳೆಯಬೇಕೆಂದಡೆ ಸ್ಥಲ ಸಾಲದಯ್ಯಾ- ಹಲಬರು ಛಲವಿಡಿದುವಿಡಿದು ಹೊಲಬುಗೇಡಿಯಾದರು ನೋಡಾ, ಕಪಿಲಸಿದ್ಧಮಲ್ಲಿಕಾರ್ಜುನಾ.