ವಚನ - 1627     
 
ಮನವೆಂಬುದು ಬೇರಿಲ್ಲ ; ಮಹಾದೇವನ ಮಹಾ ಅರುಹು ನೋಡಾ. ಸಂಕಲ್ಪ ವಿಕಲ್ಪಂಗಳ ಧರಿಸಿದಲ್ಲಿ ಮನವೆನಿಸಿತ್ತು ; ಅದು ಅಳಿದಲ್ಲಿ ಮಹಾಜ್ಞಾನವೆನಿಸಿತ್ತು ; ಅಳಿದ ಭಾವ ತಲೆದೋರಿದಲ್ಲಿ ಕಪಿಲಸಿದ್ಧಮಲ್ಲಿಕಾರ್ಜುನನೆನಿಸಿತ್ತು.