ವಚನ - 1778     
 
ಆದಿಯಲ್ಲಿ ಬಯಲು, ಅಂತ್ಯದಲ್ಲಿ ಬಯಲು, ಮಧ್ಯದಲ್ಲಿ ತೋರಿ ಕೆಡುವುದದು ನೋಡಾ, ಈ ಘಟವು. ತೋರಿ ತೋರಿ ಕೆಡುವುದಕ್ಕೆ, ಈ ಜಗದಲ್ಲಿ ಇದೆ ದೃಷ್ಟ ನೋಡಾ ಕಪಿಲಸಿದ್ಧಮಲ್ಲಿಕಾರ್ಜುನಾ.