ವಚನ - 1946     
 
ಚರಿಸುವ ಚರನಿಗೆ ಚರ್ಚೆಯೆ ಭೂಷಣ. ಸುಂದರ ನಾರಿಗೆ ಗಂಭೀರ ಪುರುಷನೆ ಭೂಷಣ. ಕೊಳನಲ್ಲಿಯ ನೀರಿಗೆ ಕಲಹಂಸೆಯೆ ಭೂಷಣ. ವನದಲ್ಲಿಯ ವಸಂತಕ್ಕೆ ಕೋಕಿಲನಾದವೆ ಭೂಷಣ. ನಮ್ಮ ಕಪಿಲಸಿದ್ಧಮಲ್ಲಿಕಾರ್ಜುನನ ಶರಣರಿಗೆ ನಿರ್ಮಲ ನಿಜಾನಂದವೆ ಭೂಷಣ.