ವಚನ - 1949     
 
ಆಗದಾಗದು ಮಾಡದವಂಗೆ ಬ್ರಹ್ಮಪದವಿ. ಆಗದಾಗದು ಮಾಡದವಂಗೆ ವಿಷ್ಣುಪದವಿ. ಆಗದಾಗದು ಮಾಡದವಂಗೆ ಶಿವಪದವಿ. ಆಗದಾಗದು ಮಾಡದವಂಗೆ ತೂರ್ಯಾತೀತ ನಿರ್ಮಲ ನಿಜಾನಂದ, ಕಪಿಲಸಿದ್ಧಮಲ್ಲಿಕಾರ್ಜುನನ ಅರಿವು.