ವಚನ - 1075     
 
ಕಾಯಗುಣ ಕೆಟ್ಟ ಮತ್ತೆ ಅರ್ಚನೆ ಹಿಂಗಿತ್ತು. ಪ್ರಾಣಗುಣ ಕೆಟ್ಟ ಮತ್ತೆ ಅರ್ಪಿತ ಹಿಂಗಿತ್ತು. ಭಾವಗುಣ ಕೆಟ್ಟ ಮತ್ತೆ ಉಭಯ ಜಂಜಡ ಹಿಂಗಿತ್ತು. ಇಂತಾದ ಕಾರಣ-ನಮ್ಮ ಗುಹೇಶ್ವರನ ಶರಣರು ಲಿಂಗಭೋಗೋಪಭೋಗವೆಂಬ ಖಂಡಿತ ಬುದ್ಧಿಯ ಮೀರಿ, ಅಖಂಡಾದ್ವೈತಬ್ರಹ್ಮದಲ್ಲಿ ತಲ್ಲೀಯವಾದರು.