ವಚನ - 1077     
 
ಕಾಯಗುಣವಳಿದು, ಮಾಯಾಮದ ಮುರಿದು, ಕಾಮಕ್ರೋಧಂಗಳೆಲ್ಲವು ಹೆರೆಹಿಂಗಿ ಹೋದವು. ಅಂಗವೆಲ್ಲವು ಲಿಂಗಲೀಯವಾಗಿ, ಕಂಗಳ ಕಳೆಯ ಬೆಳಗಳಿದು, ಗುಹೇಶ್ವರನ ವಿರಹದುರಿಯೊಳಗೆ ಬೆಂದವರ ಮರಳಿ ಸುಟ್ಟಿಹೆನೆಂಬ ಸಿದ್ಧರಾಮಯ್ಯ ಮರುಳ ನೋಡಾ.