ವಚನ - 1080     
 
ಕಾಯದ ಒಲವರದಲ್ಲಿ ನಿಲುವ ಚಿತ್ತ, ಕಂಗಳ ಗೊತ್ತಿನಲ್ಲಿ ಕಟ್ಟುವಡೆದು, ದೃಷ್ಟದ ಇಷ್ಟದಲ್ಲಿ ಕಂಗಳ ಸೂತಕ ಹಿಂಗಿ ಮನದ ಸೂತಕ ಹರಿದು ಗುಹೇಶ್ವರನೆಂಬ ಭಾವದ ಭ್ರಮೆ ಅಡಗಬೇಕು.