ವಚನ - 1081     
 
ಕಾಯದ ಕಳವಳಕ್ಕಂಜಿ ಪ್ರಾಣ ಹೋದಲ್ಲಿ, ಭವ ಹಿಂಗದು, ಪ್ರಕೃತಿ ಬಿಡದು. ವಾಯಕ್ಕಾದಡೆ ಸತ್ತು ದೇವರ ಕೂಡಿಹೆವೆಂಬರು, ಈ ವಾಯದ ಮಾತಿಂಗೆ ಆನು ಬೆರಗಾದೆನು. ಕಾಯವಿದ್ದಲ್ಲಿ ಸಾಯದ ಸಾವ ಬಲ್ಲಡೆ ಬೇರಿಲ್ಲ, ಗುಹೇಶ್ವರ ತಾನೆ!