ವಚನ - 1134     
 
ಕೈಲಾಸವೆಂಬುದೊಂದು ಬೆಳ್ಳಿಯ ಬೆಟ್ಟ, ಅಲ್ಲಿದ್ದಾತ ರುದ್ರನೊಬ್ಬ. ಆ ಬೆಟ್ಟಕ್ಕೂ ಆ ರುದ್ರಂಗೆಯೂ ಪ್ರಳಯವುಂಟೆಂಬುದ ಗುಹೇಶ್ವರಾ ನಿಮ್ಮ ಶರಣ ಬಲ್ಲನು.