ವಚನ - 1187     
 
ಜಗದ ಜನವ ಹಿಡಿದು ಉಪದೇಶವ ಮಾಡಿದ ಗುರುವಿಂಗೆ, ಆ ಉಪದೇಶ ಕೊಟ್ಟುಕೊಂಡ ಮಾರಿಗೆ ಹೋಹುದಲ್ಲದೆ ಅಲ್ಲಿ ನಿಜವಳವಡುವುದೆ? ತೆರನನರಿಯದ ಸಂಸಾರ ಜೀವಿಗಳು ಮಾಡಿದ ದೋಷ ತಮ್ಮನುಂಗಿ, ಆ ಗುರುವಿಂಗೆ ಉಪಹತಿಯ ಮಾಡುವುದು ನೋಡಾ. ಗುಹೇಶ್ವರಾ ತಾನಿಟ್ಟ ಬೇತಾಳ ತನ್ನನೆ ತಿಂದಡೆ ಬೇಕು ಬೇಡ ಎನಲುಂಟೆ?