ವಚನ - 1194     
 
ಜ್ಞಾನದಿಂದ ನಿಮ್ಮನರಿದಿಹೆನೆಂದಡೆ: ಅರಿವಿಂಗೆ ಬಂದಾಗಲೆ ಕುರುಹು. ಕುರುಹಿಂಗೆ ಕೇಡುಂಟು. ಜ್ಞಾನವೆಂಬುದೇನು? ಮನೋಭೇದ! ಇಂತಪ್ಪ ಜ್ಞಾನದ ಕೈಯಲ್ಲಿ, ಅರುಹಿಸಿಕೊಂಡಡೆ ನೀ ದೇವನಲ್ಲ, ಅರಿಯದಿದ್ದಡೆ ನಾ ಶರಣನಲ್ಲ. ನೀ ದೇವ, ನಾ ಶರಣನೆಂತಾದೆ ಹೇಳಾ ಗುಹೇಶ್ವರಾ?