ವಚನ - 1196     
 
ಜ್ಞಾನೋದಯವಾಗಿ ಷಟ್‍ಸ್ಥಲದ ನಿರ್ಣಯವೆಂತುಟೆಂದು ವಿಚಾರಿಸೆ: ಮೊದಲಲ್ಲಿ ಭಕ್ತಸ್ಥಲವೆಂತು ಹೇಳಿತ್ತು- ಅಂತೆ ನಡೆದು ಪೂರೈಸಿ ಮಾಹೇಶ್ವರಸ್ಥಲಕ್ಕೆ ಬಂದು, ಮಾಹೇಶ್ವರಸ್ಥಲವೆಂತು ಹೇಳಿತ್ತು- ಅಂತೆ ನಡೆದು ಪೂರೈಸಿ ಪ್ರಸಾದಿಸ್ಥಲಕ್ಕೆ ಬಂದು, ಪ್ರಸಾದಿಸ್ಥಲವೆಂತು ಹೇಳಿತ್ತು- ಅಂತೆ ನಡೆದು ಪೂರೈಸಿ ಪ್ರಾಣಲಿಂಗಿಸ್ಥಲಕ್ಕೆ ಬಂದು, ಪ್ರಾಣಲಿಂಗಿಸ್ಥಲವೆಂತು ಹೇಳಿತ್ತು- ಅಂತೆ ನಡೆದು ಪೂರೈಸಿ ಶರಣಸ್ಥಲಕ್ಕೆ ಬಂದು, ಶರಣಸ್ಥಲವೆಂತು ಹೇಳಿತ್ತು- ಅಂತೆ ನಡೆದು ಪೂರೈಸಿ ಐಕ್ಯಸ್ಥಲಕ್ಕೆ ಬಂದು, ಐಕ್ಯಸ್ಥಲವೆಂತು ಹೇಳಿತ್ತು- ಅಂತೆ ನಡೆದು ಪೂರೈಸಿ ನಿರವಯಸ್ಥಲಕ್ಕೆ ಬಂದು ನಿರಾಳಕ್ಕೆ ನಿರಾಳನಾದೆನಯ್ಯಾ ಗುಹೇಶ್ವರಾ.