ವಚನ - 1204     
 
ತನಗುಳ್ಳ ನಿಧಾನ ತನಗಿಲ್ಲದಂತೆ, ಬಂಧುಗಳೆಲ್ಲರ ನುಂಗಿ ಅಂಬುಧಿ ಬತ್ತಿತ್ತು. ಅದುಭುತ ಸತ್ತಿತ್ತು, ರಣರಂಗವತ್ತಿತ್ತು. ಇರುಳು ಮಾಣಿಕವ ನುಂಗಿ ಮರಣವಾದ ಬಳಿಕ ಅಮೃತದ ಪುತ್ಥಳಿಯ ಹಾಲ ಕುಡಿಯ ಕರೆದಡೆ ಗುಹೇಶ್ವರಲಿಂಗಕ್ಕೆ ಊಟವೆಂಬುದಿಲ್ಲ ನೋಡಾ, ಸಂಗನಬಸವಣ್ಣಾ.