ವಚನ - 121     
 
ಅಗ್ನಿಸ್ತಂಭದ ರಕ್ಷೆಯಿದ್ದು ಮನೆ ಬೆಂದಿತ್ತಯ್ಯಾ. ಬಲಮುರಿಯ ಶಂಖವಿದ್ದು ಪದ ಹೋಯಿತ್ತಯ್ಯಾ. ಏಕಮುಖ ರುದ್ರಾಕ್ಷಿಯಿದ್ದು ವಿಘ್ನವಾಯಿತ್ತಯ್ಯಾ. ಇವೆಲ್ಲವ ಸಾಧಿಸಿದಡೆ, ಏನೂ ಇಲ್ಲದಂತಾಯಿತ್ತು ಕಾಣಾ ಗುಹೇಶ್ವರಾ.