ವಚನ - 1215     
 
ತನುವ ಗುರುವಿಂಗರ್ಪಿಸಿ, ಮನವ ಲಿಂಗಕ್ಕರ್ಪಿಸಿ, ಭಾವವ ಜಂಗಮಕ್ಕರ್ಪಿಸಿ, ನಿಜವ ತೃಪ್ತಿಯಲರ್ಪಿಸಿ, ಘನವ ಅರಿವಿಂಗೆ ಅರ್ಪಿಸಿ, ಅರ್ಪಿತವೆ ಅನರ್ಪಿತವಾಗಿ, ಅನರ್ಪಿತವೆ ಅರ್ಪಿತವಾಗಿ ಅರ್ಪಿತ ಅನರ್ಪಿತಗಳಳಿದುಳಿದು ನಿತ್ಯಪ್ರಸಾದಿಯಾಗಿ ಪ್ರಸಾದದ ಹಾದಿಯನೆಲ್ಲರಿಗೆ ತೋರಿ ಮಹಾಪ್ರಸಾದದ ಬೆಳವಿಗೆಯ ಮಾಡಿದನು- ಗುಹೇಶ್ವರನ ಶರಣ ಚೆನ್ನಬಸವಣ್ಣನು.