ವಚನ - 1221     
 
ತನುವಿನಲ್ಲಿಪ್ಪ ಲೋಭವ ಮನವ ಕದ್ದು ಮಾತನಾಡಿದಡೆ ಆ ತನುವೆ ಮನೋರೂಪವಾಗಿ ಕಾಣಬರುತ್ತದೆ. ಆ ಮನದಲ್ಲಿ ಬಯಕೆ ಸಮರತಿಯಾಗದಾಗಿ; ಕಾಯದ ಕರುಳು ಲೋಭದ ಬಯಕೆಯೊಳಗದೆ. ಅರಿದೆನೆಂದು ಬರುಮಾತ ನುಡಿದಡೆ ನಮ್ಮ ಗುಹೇಶ್ವರಲಿಂಗವು ಮೆಚ್ಚ ನೋಡಾ ಮಡಿವಾಳ ಮಾಚಯ್ಯಾ.